ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.
ಇತ್ತೀಚಿನ ಪೋಸ್ಟ್‌ಗಳು

ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023

ಅವ್ವ ಪುಸ್ತಕಲಯ ಸಾಹಿತ್ಯ ಬಳಗವು ದಿ. ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಫಲಿತಾಂಶ ಈ ಕೆಳಗಿನಂತಿದೆ. ಅಹರ್ನಿಶಿ ಪ್ರಕಾಶನದ ಫಾತಿಮಾ ರಲಿಯಾ ಅವರು ಬರೆದಿರುವ "ಕಡಲು ನೋಡಲು ಹೋದವಳು" ಪ್ರಬಂಧ ಸಂಕಲನಕ್ಕೆ ಈ ವರ್ಷದ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ದೊರಕಿದೆ. ಸಂತೋಷಕುಮಾರ ಮೆಹೆಂದಳೆ ಅವರ "ವೈಜಯಂತಿಪುರ" ಕಾದಂಬರಿ, ಚೈತ್ರಾ ಶಿವಯೋಗಿಮಠ ಅವರ "ಪೆಟ್ರಿಕೋರ್" ಕವನಸಂಕಲನ, ಗಾಯತ್ರಿರಾಜ್ ಅವರ "ಟ್ರಾಯ್" ಕಾದಂಬರಿ, ಮುನವ್ವರ್ ಜೋಗಿಬೆಟ್ಟು ಅವರ "ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್" ಕಥಾಸಂಕಲನ ಕೃತಿಗಳು ಈ ವರ್ಷದ ಮೆಚ್ಚುಗೆ ಬಹುಮಾನಕ್ಕೆ ಆಯ್ಕೆಯಾಗಿವೆ. ಲೇಖಕ, ವಿಮರ್ಶಕರಾದ ಮಹೇಶ ಅರಬಳ್ಳಿ ಅವರು ಕೃತಿಗಳ ಆಯ್ಕೆಯಲ್ಲಿ ತೀರ್ಪುಗಾರರಾಗಿದ್ದರು. ಐದು ಕೃತಿಯ ಲೇಖಕರಿಗೆ 2024ರ ಜನೆವರಿ ತಿಂಗಳಲ್ಲಿ ನಡೆಯುವ ಅವ್ವ ವಾರ್ಷಿಕೋತ್ಸವದಲ್ಲಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ  avvapustakaalaya@gmail.com  ಗೆ ಬರೆಯಿರಿ..

ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಕಿರುಪಟ್ಟಿ ಪ್ರಕಟ

ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ದಿ. ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಕ್ಕೆ 90 ಕೃತಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 10 ಕೃತಿಗಳನ್ನು ತೀರ್ಪುಗಾರರು ಕಿರುಪಟ್ಟಿ ಮಾಡಿರುತ್ತಾರೆ. ಪಟ್ಟಿಯು ಈ ಕೆಳಗಿನಂತಿರುತ್ತದೆ. ಕಿರುಪಟ್ಟಿಯಲ್ಲಿ ಸ್ಥಾನ ಪಡೆದ ಹತ್ತು ಜನ ಲೇಖಕರಿಗೆ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ಶುಭಾಶಯಗಳು.  - ಅವ್ವ ಪುಸ್ತಕಾಲಯ  8548948660

ಪೂಚಂತೇ ಕವಿತೆಗಳ ವಾಚನ ಸ್ಪರ್ಧೆ ಫಲಿತಾಂಶ

ವಿಜೇತರಿಗೆ ಅಭಿನಂದನೆಗಳು. ಈ ಕೆಳಗಿನ ಪ್ರಕಟಣೆಯಲ್ಲಿ ತಿಳಿಸಿರುವ ಕಾರ್ಯಕ್ರಮದಲ್ಲಿ ಎಲ್ಲರಿಗೂ ಅಭಿನಂದಿಸಲಾಗುವುದು. ಇನ್ನಷ್ಟು ಸಾಹಿತ್ಯ ಸ್ಪರ್ಧೆಗಳು & ಚಟುವಟಿಕೆಗಳಿಗಾಗಿ ನಮ್ಮ ತಂಡಗಳನ್ನು ಹಿಂಬಾಲಿಸಿ, ಬೆಂಬಲಿಸಿ.. 1.  https://instagram.com/dayavittu.gamanisi?igshid=MmU2YjMzNjRlOQ== 2.  https://instagram.com/avva_pustakaalaya?igshid=MmU2YjMzNjRlOQ== 3.  https://instagram.com/peldante_payanigaru?igshid=MmU2YjMzNjRlOQ== 4.  https://www.facebook.com/groups/3344469948953030/?ref=share_group_link 5.  https://www.facebook.com/groups/859399305807670/?ref=share_group_link

ಅವ್ವ ಪುಸ್ತಕಾಲಯ ನೂತನ ಸಮಿತಿ ಪಟ್ಟಿ ಬಿಡುಗಡೆ

ನಮಸ್ಕಾರ 💐  ಕೊರೋನಾ ಸಮಯದಲ್ಲಿ ಲೇಟ್. ನರಸಯ್ಯ ಅವರ ಸ್ಮರಣಾರ್ಥಕವಾಗಿ ಸ್ಥಾಪಿಸಿದ ಅವ್ವ ಪುಸ್ತಕಲಯ ಸಾಹಿತ್ಯ ಬಳಗ ಇವತ್ತು ನಿಮ್ಮೆಲ್ಲರನ್ನು ನಮಗೂ, ನಮ್ಮನ್ನು ನಿಮಗೂ ಪರಿಚಯಿಸಿದೆ. ಇದೊಂದು ಡಿಜಿಟಲ್ ಬ್ಲಾಗ್ ಮತ್ತು ಸಾಹಿತ್ಯಾಸಕ್ತರೇ ಸೇರಿಕೊಂಡು ಕಟ್ಟಿದ ತಂಡ. ಈಗಾಗಲೇ 4 ಪುಸ್ತಕಗಳು ಪ್ರಕಟಗೊಂಡಿವೆ ಮತ್ತು ಮೂರು ವರ್ಷಗಳಿಂದಲೂ ಪ್ರಕಟಿತ ಕೃತಿಗಳನ್ನು ಆಹ್ವಾನಿಸಿ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದೇವೆ. ಸಾಕಷ್ಟು ಸಾಹಿತ್ಯ ಕಾರ್ಯಕ್ರಮಗಳು, ಚಟುವಟಿಕೆಗಳು, ಸ್ಪರ್ಧೆಗಳನ್ನು ಹಮ್ಮಿಕೊಳ್ಳುವ ಮೂಲಕ ಅವ್ವ ಪುಸ್ತಕಾಲಯ ಸಾಹಿತ್ಯದ ಘಮವನ್ನ ಪಸರಿಸುತ್ತಾ ನಿಮ್ಮೆಲ್ಲರನ್ನ ತಲುಪಿದೆ. ಅದರಲ್ಲಿ ನಿಮ್ಮೆಲ್ಲರ ಸಹಕಾರ ದೊಡ್ಡದಿದೆ. ಬಹಳಷ್ಟು ಜನ ಕೇಳುತ್ತಿರುತ್ತಾರೆ. ಅವ್ವ ಪುಸ್ತಕಾಲಯ ಎಲ್ಲಿದೆ? ಅದು ಒಬ್ಬರೇ ನಡೆಸುವ ಸಂಸ್ಥೆಯ? ತಂಡದಲ್ಲಿ ಯಾರು ಯಾರೆಲ್ಲ ಇದ್ದಾರೆ? ಅಂತ. ಅವರಿಗೆಲ್ಲ ಹೀಗೆ ಹೇಳುತ್ತಾ ಬಂದಿದ್ದೆವು. "ಇಲ್ಲ ಒಬ್ಬರೇ ಅಲ್ಲ, ಅದರ ಹಿಂದೆ ಬಹಳಷ್ಟು ಜನರ ಶ್ರಮವಿದೆ" ಅಂತ. ಆದರೆ ಅವರನ್ನು ಈವರೆಗೆ ಪರಿಚಯಿಸುವ ಸಮಯ ಒದಗಿ ಬಂದಿರಲಿಲ್ಲ. ಈಗ ನಿಮ್ಮ ಮುಂದೆ ಅವರೆಲ್ಲರನ್ನೂ ಪರಿಚಯಿಸುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಸಹಕಾರ ನಮ್ಮ ಬಳಗದ ಮೇಲೆ ಹೀಗೇ ಇರಲಿ..  - ಅವ್ವ ಪುಸ್ತಕಾಲಯ  ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ನೂತನ ಸಮಿತಿ ಈಕೆಳಗಂಡಂತಿದೆ.  ಅಧ್ಯ...

ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

"ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ - 2023"  ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ಇವರ ವತಿಯಿಂದ ಪ್ರತೀ ವರ್ಷದಂತೆ "ಶ್ರೀಮಾನ್ ಲೇ. ನರಸಯ್ಯ" ಅವರ ಸ್ಮರಣಾರ್ಥ ಕೊಡಮಾಡುವ "ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ" ಗಾಗಿ 2022 ಮತ್ತು 2023 ರಲ್ಲಿ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.  * ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ.  * 2023 ರ ಆಗಸ್ಟ್ 31 ರ ಒಳಗೆ ತಮ್ಮ ಕೃತಿಯ ಮೂರು ಪ್ರತಿಗಳನ್ನು, ಪ್ರತ್ಯೇಕ ಹಾಳೆಯಲ್ಲಿ ಬರೆದ ಸ್ವಪರಿಚಯ, ಸಂಪೂರ್ಣ ಅಂಚೆ ವಿಳಾಸ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಅಂಚೆಯ ಮೂಲಕವೇ (Printed Book Registered Post) ತಮ್ಮ ಕೃತಿಗಳನ್ನು ಕಳಿಸಬಹುದಾಗಿದೆ. ಒಬ್ಬ ಲೇಖಕ ತನ್ನ ಎರಡು ಕೃತಿಗಳ ಮೂಲಕ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.  * ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ. ಆತ್ಮಕತೆ, ವಿಮರ್ಶಾ ಸಂಕಲನ, ಪಿ.ಹೆಚ್.ಡಿ ಪ್ರಬಂಧಗಳು, ಅನುವಾದ ಹಾಗೂ ಸಂಶೋಧನಾ ಕೃತಿಗಳನ್ನು ಹೊರತುಪಡಿಸಿ ಸಾಹಿತ್ಯದ ಯಾವುದೇ ಪ್ರಕಾರದ (ಕತೆ, ಕಾದಂಬರಿ, ಕವಿತೆ, ಹನಿಗವನ, ನಾಟಕ, ಲೇಖನ, ಲಲಿತ ಪ್ರಬಂಧ, ಪ್ರವಾಸ ಕಥನ) ಕೃತಿಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  * ನವೆಂಬರ್ ತಿಂಗಳಲ್ಲಿ ಕಿರುಪಟ್ಟಿ ಬಿಡುಗಡೆ ಮಾಡಲಾಗ...

ಹನಿಗವನ ಸ್ಪರ್ಧೆಯ ವಿಜೇತ ಕವನಗಳು - ಅವ್ವ ಪುಸ್ತಕಾಲಯ

              (ಚಿತ್ರ : ಕಾರ್ತಿಕ್ ಎಸ್ ಕಾರ್ಗಲ್ಲು) ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಆಯೋಜಿಸಿದ್ದ "ಮಾನವೀಯತೆ" ವಿಷಯಧಾರಿತ ಹನಿಗವನ ಸ್ಪರ್ಧೆ 2023ರ ವಿಜೇತ ಕವನಗಳನ್ನು ಓದುಗರಿಗಾಗಿ ಪ್ರಕಟಿಸಲಾಗಿದೆ. 01. ಮಾನವೀಯತೆ ಸಂಜೆ ಮನೆಯ ಪ್ರಾಂಗಣದಲ್ಲಿ ಮ್ಯಾರೇಜ್ ಎನ್ವರ್ಸರಿಯ ಹಬ್ಬ! ಗಂಡ ಹೆಂಡತಿ ಸ್ನೕಹಿತರೆಲ್ಲ ಕೇಕ್ ಕತ್ತರಿಸಿ, ಬಣ್ಣದಂತೆ ಬಳಿದುಕೊಂಡಿದ್ದಾರೆ ಮುಖಕೆ! ಎಲ್ಲರ ಕೈಯಲ್ಲಿ  ಬೀಯರ್ ಬಾಟಲಿಗಳು,  ಚಲ್ಲಾಪಿಲ್ಲಿಯಾಗಿ ಬಿದ್ದ ಮೃಷ್ಟಾನ್ನ! ಅತ್ತ ಮನೆಯ ಮೂಲೆಯೊಂದರಲ್ಲಿ ಮಾನವೀಯತೆಯ ವೃದ್ಧ  ಮಡಿಲುಗಳೆರಡು ಹಲುಬುತ್ತಿರುವ ಸದ್ದು! ಕೇಳುವವರಾರು!? - ಸುರೇಶ ಮುದ್ದಾರ 02. ಗಾಂಧಿ ಪಾರ್ಕಿನ ಗಾಂಧಿ ನಕ್ಕಿದ್ದ..  ಜಾತಿ - ಧರ್ಮಗಳೆಂದು ಬಡಿದಾಡುವವರ  ಮಸೀದಿ - ಮಂದಿರಗಳಿಗಾಗಿ ಕಿತ್ತಾಡುವವರ  ಹೊಟ್ಟೆ ಹೊರೆಯದ ಭಗವದ್ಗೀತೆ, ಕುರಾನಿಗಾಗಿ ನಡುರಸ್ತೆಯಲ್ಲಿ ರಕ್ತ ಹರಿಸುವವರ ಕಂಡು ಗಾಂಧಿ ಪಾರ್ಕಿನ ಗಾಂಧಿ ನಕ್ಕಿದ್ದ..  ಹಸಿದ ಭಿಕ್ಷುಕರ ಖಾಲಿ ಹೊಟ್ಟೆ ಕಾಣದ  ದಾರಿಯಲ್ಲಿನ ಅನಾಥ ಮಗುವಿನೆಡೆ ಕಣ್ಣೆತ್ತಿ ನೋಡದ   ತನ್ನ ಹುಟ್ಟಿಸಿದವರನ್ನೇ ಮನೆ ಬಿಟ್ಟು ಅಟ್ಟಿದ ಪತ್ರಿಕೆಯಲ್ಲಿನ ಸಮಾಜ ಸೇವಕರ ಸೇವೆಯ ಕಂಡು ಗಾಂಧಿ ಪಾರ್ಕಿನ ಗಾಂಧಿ ನಕ್ಕಿದ್ದ..  ಜಾತಿ - ಧರ್ಮಗಳ ಬೇಲಿ ದಾಟಿ ಬದುಕಿ ಎಂದವರನ್ನೆ ಧರ...