ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.
ಅವ್ವ ಪುಸ್ತಕಲಯ ಸಾಹಿತ್ಯ ಬಳಗವು ದಿ. ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಫಲಿತಾಂಶ ಈ ಕೆಳಗಿನಂತಿದೆ. ಅಹರ್ನಿಶಿ ಪ್ರಕಾಶನದ ಫಾತಿಮಾ ರಲಿಯಾ ಅವರು ಬರೆದಿರುವ "ಕಡಲು ನೋಡಲು ಹೋದವಳು" ಪ್ರಬಂಧ ಸಂಕಲನಕ್ಕೆ ಈ ವರ್ಷದ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ದೊರಕಿದೆ. ಸಂತೋಷಕುಮಾರ ಮೆಹೆಂದಳೆ ಅವರ "ವೈಜಯಂತಿಪುರ" ಕಾದಂಬರಿ, ಚೈತ್ರಾ ಶಿವಯೋಗಿಮಠ ಅವರ "ಪೆಟ್ರಿಕೋರ್" ಕವನಸಂಕಲನ, ಗಾಯತ್ರಿರಾಜ್ ಅವರ "ಟ್ರಾಯ್" ಕಾದಂಬರಿ, ಮುನವ್ವರ್ ಜೋಗಿಬೆಟ್ಟು ಅವರ "ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್" ಕಥಾಸಂಕಲನ ಕೃತಿಗಳು ಈ ವರ್ಷದ ಮೆಚ್ಚುಗೆ ಬಹುಮಾನಕ್ಕೆ ಆಯ್ಕೆಯಾಗಿವೆ. ಲೇಖಕ, ವಿಮರ್ಶಕರಾದ ಮಹೇಶ ಅರಬಳ್ಳಿ ಅವರು ಕೃತಿಗಳ ಆಯ್ಕೆಯಲ್ಲಿ ತೀರ್ಪುಗಾರರಾಗಿದ್ದರು. ಐದು ಕೃತಿಯ ಲೇಖಕರಿಗೆ 2024ರ ಜನೆವರಿ ತಿಂಗಳಲ್ಲಿ ನಡೆಯುವ ಅವ್ವ ವಾರ್ಷಿಕೋತ್ಸವದಲ್ಲಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ avvapustakaalaya@gmail.com ಗೆ ಬರೆಯಿರಿ..