ವಿಷಯಕ್ಕೆ ಹೋಗಿ

ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು - ಲೇಖನ - ರಾಕೇಶ್ ವಿ ಪತ್ತಾರ



ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು

     ಬಾಲ್ಯವಿವಾಹ ಎಂಬುದು ನಮ್ಮ ಸಮಾಜವನ್ನು ಕಾಡಿದ ಒಂದು ಸಾಮಾಜಿಕ ಸಮಸ್ಯೆಯಾಗಿದೆ. 21 ವರ್ಷದ ಒಳಗಿನ ಹುಡುಗ ಹಾಗೂ 18 ವರ್ಷದ ಒಳಗಿನ ಹುಡುಗಿಯ ನಡುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನ ಒಳಗಿದ್ದರೂ ಇಂಥಹ ಮದುವೆಗೆ ಬಾಲ್ಯವಿವಾಹ ಎಂದು ಕರೆಯುತ್ತಾರೆ.ಈ  ಸಾಮಾಜಿಕ ಸಮಸ್ಯೆಯನ್ನು ತಡೆಯೋಕೆ ಕಠಿಣ ಕಾನೂನನ್ನು ಜಾರಿಗೊಳಿಸಿದರೂ ಸದ್ಯ ಇದರ ನಿಯಂತ್ರಣ ಇನ್ನು ಆಗಿಲ್ಲ. ಬಾಲ್ಯವಿವಾಹ ಮಾಡುವುದು ಕಾನೂನು ಪ್ರಕಾರ ಅಪರಾಧ.ಒಂದು ಹೆಣ್ಣು ಮದುವೆಯಾಗಬೇಕಾದರೆ ಅವಳ ದೇಹ,ಮನಸ್ಸು, ಮಾನಸಿಕ ಪ್ರಬುದ್ಧತೆ ಹಾಗೆ ಆಕೆಯ ಶಾರೀರಿಕ ಸಾಮರ್ಥ್ಯ ಬೆಳೆಯಲು 18 ವರ್ಷ ಅವಶ್ಯಕವಾಗಿ ಬೇಕೇ ಬೇಕು, ಆದರೆ ನಮ್ಮ ಹಳ್ಳಿಯಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಸಂಭವಿಸುತ್ತಿವೆ ಯಾಕೆಂದರೆ ನಮ್ಮ ಹಳ್ಳಿಯಲ್ಲಿ ಬಾಲ್ಯವಿವಾಹಕ್ಕೆ ಒಳಗಾದ ಗಂಡು ಅಥವಾ ಹೆಣ್ಣಿನ ಪೋಷಕರಿಗೆ ಸರಿಯಾದ ಶಿಕ್ಷಣ ಇಲ್ಲದಿರುವುದರಿಂದ ಮತ್ತು  ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿರುವುದರಿಂದ ಈ ಪಿಡುಗು ಹೆಮ್ಮರವಾಗಿ ಬೆಳೆದಿದೆ.ಈ ಕೊರೋನಾ ಸೋಂಕು ಮಕ್ಕಳ ಬಾಲ್ಯವನ್ನೇ ಕಸಿಯುತ್ತಿದೆ. 'ಯುನಿಸೆಫ್' ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಭಾರತದಲ್ಲಿ ಒಂದು ಕೋಟಿಗೂ ಹೆಚ್ಚು ಬಾಲಕಿಯರು 18 ವರ್ಷ ತುಂಬುವ ಮೊದಲೇ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ ಹಾಗೆ ಜಗತ್ತಿನಲ್ಲಿ ಅತಿ ಹೆಚ್ಚು ಬಾಲ್ಯವಿವಾಹಗಳು ನಡೆಯುತ್ತಿರುವ  ದೇಶಗಳಲ್ಲಿ ಮುಂಚೂಣಿಯಲ್ಲಿ ಬಾಂಗ್ಲಾದೇಶವಾದರೆ ನಂತರದ ಸ್ಥಾನವೇ ಭಾರತವಾಗಿದೆ, ಅದರಲ್ಲೂ  ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಕಾನೂನಿನ ಭಯವಿಲ್ಲದೆ ನಡೆಯುತ್ತಿರುವುದು ಒಂದು ವಿಷಾದಕರ ಸಂಗತಿಯಾಗಿದೆ. ಮಕ್ಕಳ ಹಕ್ಕುಗಳ ಆಯೋಗದ ಪ್ರಕಾರ 2020 ಏಪ್ರಿಲ್ ನಿಂದ 2021 ಜನೇವರಿವರೆಗೆ  ಸದ್ಯ ನಮ್ಮ ರಾಜ್ಯದಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ 2180 ಆಗಿದೆ. ಈ ಕೊರೋನಾದ ಲಾಕ್ಡೌನ್  ಸಂದರ್ಭವು ಬಾಲ್ಯವಿವಾಹಕ್ಕೆ ಒಳಗಾದ ಮಕ್ಕಳಿಗೆ ಎಲ್ಲದರಿಂದ ವಂಚಿತರನ್ನಾಗಿಸಿ ಅವರ ಕನಸುಗಳನ್ನು ನುಚ್ಚುನೂರು ಮಾಡಿ ಭವಿಷ್ಯವನ್ನೇ ಕಸಿದುಕೊಂಡು ಬಿಟ್ಟಿದೆ ಅದಕ್ಕೆ, ಮೊದಲು ಮಕ್ಕಳು ಮತ್ತು ಅವರ ತಂದೆ-ತಾಯಿಗಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಲೇಬೇಕು ಅದರ ಜೊತೆಗೆ ಜನರು ಈ ಸಾಮಾಜಿಕ ಪಿಡುಗಿನ ಬಗ್ಗೆ ಜಾಗೃತರಾಗಿ ಎಲ್ಲಿಯಾದರೂ ಬಾಲ್ಯವಿವಾಹವು ಆಗುತ್ತಿದ್ದರೆ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕ್ಕೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ತಲುಪಿಸಬೇಕು. ಮಕ್ಕಳ ಹಕ್ಕುಗಳ ಸಂಘಟನೆಗಳು ಮತ್ತು ಈ ಬಾಲ್ಯವಿವಾಹವನ್ನು ತಡೆಯೋಕೆ ಸರ್ಕಾರವು ನೇಮಿಸಿರುವಂತ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚೆಚ್ಚು ಕೆಲಸ ಮಾಡಿ ಬಾಲ್ಯವಿವಾಹವನ್ನು ತಡೆಯಬೇಕು. ಜನರು ಕೂಡ ಈ ಸಾಮಾಜಿಕ ಸಮಸ್ಯೆಯ ವಿರುದ್ಧ ಹೋರಾಡಿ ಮಕ್ಕಳ ಬಾಲ್ಯವನ್ನು ರಕ್ಷಿಸುವ ಕರ್ತವ್ಯವನ್ನು ಪಾಲಿಸಬೇಕು.
ಬಾಲ್ಯವಿವಾಹವನ್ನು ತಡೆಯೋಣ , ಮಕ್ಕಳ ಬಾಲ್ಯವನ್ನು ರಕ್ಷಿಸೋಣ.

ರಾಕೇಶ. ವಿ. ಪತ್ತಾರ, ಐಕೂರ
10ನೇ ತರಗತಿ, ಆದರ್ಶ ವಿದ್ಯಾಲಯ ಶಹಾಪುರ, ಯಾದಗಿರಿ ಜಿಲ್ಲೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

Avva Pustakalaya

ಅವ್ವ ಪುಸ್ತಕಾಲಯ ಸಾಹಿತ್ಯ ಬಳಗವು 2020 ರ ಏಪ್ರಿಲ್ 04 ರಂದು ಶ್ರೀಮಾನ್ ಲೇಟ್ ನಾರಸಯ್ಯ ಅವರ ಸ್ಮರಣಾರ್ಥವಾಗಿ ರೂಪುಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಓದುಗರ ಬಳಗವನ್ನು ಹೊಂದಿದೆ. ಇದು ಡಿಜಿಠಲ್ ಗ್ರಂಥಾಲಯವಾಗಿದ್ದು, ಓದಿನ ಅಭಿರುಚಿ ಹಬ್ಬಿಸಲು ಬಹಳಷ್ಟು ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ಜುಲೈ ತಿಂಗಳಲ್ಲಿ ಪ್ರಕಟಿತ ಕೃತಿಗಳನ್ನು ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಆಹ್ವಾನಿಸಲಾಗುವುದು. ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿಯ ಜೊತೆಗೆ ಐದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಹಂಚಿ, ಅವರ ಪುಸ್ತಕಗಳನ್ನು ಅವ್ವ ಪುಸ್ತಕಾಲಯ ವೇದಿಕೆಯ ಮುಖೇನ ಓದುಗರಿಗೆ ಮುಟ್ಟಿಸಲಾಗುವುದು . ಈಗಾಗಲೇ ಅವ್ವ ಪುಸ್ತಕಾಲಯದಿಂದ ಪ್ರಧಾನ ಕಾರ್ಯದರ್ಶಿಗಳಾದ  ಯುವಲೇಖಕ ಅನಂತ ಅವರ ಮೂರು ಕೃತಿಗಳು ಪ್ರಕಟವಾಗಿದ್ದು ಅವುಗಳು ಓದುಗರಿಗೆ ರಿಯಾಯಿತಿ ದರದಲ್ಲಿ ಸಿಗುತ್ತಿವೆ. ಓದುಗರು ನಮ್ಮನ್ನು ಸಂಪರ್ಕಿಸುವ ಮೂಲಕ ಪುಸ್ತಕಗಳನ್ನು ಕೊಂಡು ಓದಬಹುದು. ಮತ್ತು ನಮ್ಮ ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. 1). ಅವ್ವ ಪುಸ್ತಕಾಲಯ #189, ಕೆಂಚನಹಳ್ಳಿ ಅಂಚೆ ಹುಲಿಯೂರುದುರ್ಗ ಹೋಬಳಿ ಕುಣಿಗಲ್ ತಾಲ್ಲೂಕು ತುಮಕೂರು - 572123 ಮೊ : 8548948660 Mail :  avvapustakaalaya@gmail.com 2).  Facebook....