ವಿಷಯಕ್ಕೆ ಹೋಗಿ

ಅವ್ವ ಪ್ರಶಸ್ತಿಗಾಗಿ ಹಸ್ತಪ್ರತಿ & ಕೃತಿಗಳ ಆಹ್ವಾನ - ಅವ್ವ ಪುಸ್ತಕಾಲಯ



     ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ಶ್ರೀಮಾನ್ ಲೇ. ನರಸಯ್ಯ ಅವರ ಸ್ಮರಣಾರ್ಥ, ಅವ್ವ ಪುಸ್ತಕಾಲಯದಿಂದ ಕೊಡಮಾಡುವ 'ಅವ್ವ ಪ್ರಶಸ್ತಿ - 2021' ಕ್ಕೆ ನಾಡಿನಾದ್ಯಂತ ಲೇಖಕರಿಂದ ಹಸ್ತಪ್ರತಿ ಹಾಗೂ ಕೃತಿಗಳನ್ನು ಆಹ್ವಾನಿಸಲಾಗಿದೆ.


ಅವ್ವ ಯುವ ಸಾಹಿತ್ಯ ಪುರಸ್ಕಾರ 2021 ಕ್ಕೆ ಹಸ್ತಪ್ರತಿಗಳ ಆಹ್ವಾನ :

* ಇದುವರೆಗೂ ಒಂದು ಕೃತಿಯನ್ನೂ ಸ್ವತಂತ್ರವಾಗಿ ಪ್ರಕಟಿಸದಿರುವ 50 ವರ್ಷ ಒಳಗಿನ ಯಾರು ಬೇಕಾದರೂ ಅವ್ವ ಯುವ ಸಾಹಿತ್ಯ ಪುರಸ್ಕಾರಕ್ಕಾಗಿ ಕನ್ನಡದಲ್ಲಿ ಹಸ್ತಪ್ರತಿ ಸಲ್ಲಿಸಬಹುದು.
* 1/8 ಡೆಮಿ ಅಳತೆಯಲ್ಲಿ ಕನಿಷ್ಟ 70 ಪುಟಗಳನ್ನು ಮೀರಿದ ಕಥೆಗಳು (8-10 ಕಥೆಗಳು), ಕವನಗಳು(35-40 ಕವನಗಳು), ಕಾದಂಬರಿ, ಪ್ರವಾಸ ಕಥನ ಮತ್ತು ನಾಟಕ ಪ್ರಕಾರದ ಸಾಹಿತ್ಯವನ್ನು ಮಾತ್ರ ಡಿಟಿಪಿ/ಮೊಬೈಲ್ ನಲ್ಲಿ ಟೈಪ್ ಮಾಡಿ ಪ್ರಿಂಟ್ ತೆಗೆದು ಕಳಿಸಬೇಕು.
* ಹಸ್ತಪ್ರತಿಯ ಜೊತೆ ನಿಮ್ಮ ಎಸ್.ಎಸ್.ಎಲ್.ಸಿ ಅಥವಾ ಆಧಾರ್ ಕಾರ್ಡಿನ ನಕಲು ಪ್ರತಿಯನ್ನು ಕಳುಹಿಸಬೇಕು. ಪ್ರತಿಯ ಮೇಲೆ ಸಂಪರ್ಕಿಸಬೇಕಾದ ಫೋನ್ ನಂಬರನ್ನು ನಮೂದಿಸಿರಬೇಕು.
* ಹಸ್ತ ಪ್ರತಿಯು ಶೀರ್ಷಿಕೆಯನ್ನು ಒಳಗೊಂಡಿರಬೇಕು. ಕೈಬರಹದ ಹಸ್ತಪ್ರತಿಗಳನ್ನು ಪರಿಗಣಿಸುವುದಿಲ್ಲ. ಒಬ್ಬರು ಒಂದು ಹಸ್ತಪ್ರತಿಯನ್ನು ಮಾತ್ರ ಸಲ್ಲಿಸಬಹುದು.
* ಆಯ್ಕೆಯಾದ ಒಂದು ಹಸ್ತಪ್ರತಿಗೆ 2500 ರೂಗಳ ನಗದು ಪ್ರೋತ್ಸಾಹ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು.



ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2021 ಕ್ಕೆ ಕೃತಿಗಳ ಆಹ್ವಾನ :

* 2016 ಜುಲೈ ಇಂದ 2021 ಜುಲೈ ಅಂತ್ಯದವರೆಗೆ ಪ್ರಕಟವಾಗಿರುವ ಕಥಾ ಸಂಕಲನ, ಕವನ ಸಂಕಲನ, ಕಾದಂಬರಿ, ಪ್ರವಾಸ ಕಥನ, ನಾಟಕ ಮತ್ತು ಇತರೆ ಯಾವುದೇ ಪ್ರಕಾರದ ಕನ್ನಡ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಕಳಿಸಬಹುದು.
* ಒಂದು ಕೃತಿಯ ಮೂರು ಪ್ರತಿಗಳು ಮತ್ತು ಎಸ್.ಎಸ್.ಎಲ್.ಸಿ ಅಂಕಪಟ್ಟಿ/ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು. ಪಿ. ಎಚ್. ಡಿ ಪ್ರಂಬಂಧಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
* ಒಬ್ಬ ಲೇಖಕ ತನ್ನ ಇತರೆ ಮೂರು ಕೃತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಆದರೆ ಈ ಹಿಂದೆ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಗೆದ್ದಿರುವ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
* ಆಯ್ಕೆಯಾದ ಕೃತಿಗೆ 2500 ರೂ ಮೌಲ್ಯದ ಪುಸ್ತಕ ಬಹುಮಾನ ಹಾಗೂ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು.


* ಹಸ್ತ ಪ್ರತಿ ಹಾಗೂ ಕೃತಿಗಳನ್ನು ದಿನಾಂಕ ಸೆಪ್ಟೆಂಬರ್ 15 - 2021 ರ ಒಳಗೆ ಕೆಳಗೆ ನೀಡಲಾದ ವಿಳಾಸಕ್ಕೆ ರಿಜಿಸ್ಟರ್ ಫೋಸ್ಟ್ ಮಾಡಬೇಕು.
" ಅವ್ವ ಪುಸ್ತಕಾಲಯ
#189, ಕೆಂಚನಹಳ್ಳಿ (ಅಂ)
ಹುಲಿಯೂರುದುರ್ಗ (ಹೋ), ಕುಣಿಗಲ್ (ತಾ॥)
ತುಮಕೂರು (ಜಿ) - 572123
ಮೊ : 8548948660 "

* ಪ್ರಶಸ್ತಿಗಾಗಿ ಕಳಿಸಿದ ಹಸ್ತಪ್ರತಿ ಮತ್ತು ಕೃತಿಗಳನ್ನು ಹಿಂತಿರುಗಿಸುವುದಿಲ್ಲ.

* ಹೆಚ್ಚಿನ ಮಾಹಿತಿಗಾಗಿ avvapustakaalaya@gmail.com ಗೆ ಬರೆಯಬಹುದು.

ಕಾಮೆಂಟ್‌ಗಳು

  1. ಸರ್ ನಮಸ್ಕಾರ,

    2021 ಪುಸ್ತಕ ಪ್ರಶಸ್ತಿಯ ಫಲಿತಾಂಶ ಪ್ರಕಟವಾಗಿದೆಯಾ ದಯವಿಟ್ಟು ತಿಳಿಸಿ

    ಪ್ರತ್ಯುತ್ತರಅಳಿಸಿ
  2. ಸರ್ ಪ್ರಕಟಿತ ಪುಸ್ತಕಗಳನ್ನು ಕಳುಹಿಸಬೇಕಾ ಅಥವಾ ಪ್ರಕಟಿತ ಪುಸ್ತಕದಲ್ಲಿರುವ ಮೂರು ಕೃತಿಗಳನ್ನು ಕಳುಹಿಸಬೇಕಾ ದಯವಿಟ್ಟು ತಿಳಿಸಿ 🙏🙏

    ಪ್ರತ್ಯುತ್ತರಅಳಿಸಿ
  3. ರಾಜೇಶ್ವರಿ ರಾಜರಾಜೇಶ್ವರಿ ನಗರ ಬೆಂಗಳೂರುಆಗಸ್ಟ್ 22, 2022 ರಂದು 05:44 PM ಸಮಯಕ್ಕೆ

    ಸರ್ ಪುಸ್ತಕದ ಪ್ರತಿಗಳೊ ಅಥವಾ ಪ್ರಕಟಿತ ಪುಸ್ತಕದಲ್ಲಿರುವ ಮೂರು ಕೃತಿಗಳನ್ನು ಕಳುಹಿಸಬೇಕಾ ದಯವಿಟ್ಟು ತಿಳಿಸಿ 🙏🙏

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಕೂರೋನಾದಲ್ಲೂ ಕರುಣಾಮಯಿ ಅಮ್ಮ - ಲೇಖನ - ಸಿಂಚನ ಜಿ ಎನ್

ಕೊರನದಲ್ಲೂ ಕರುಣಾಮಯಿ ಅಮ್ಮ " ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ "  ಎಂಬ ಮಾತಿನಂತೆ ಒಬ್ಬ ವ್ಯಕ್ತಿ ಎಷ್ಟೇ ದೊಡ್ಡವರಾದರೂ, ಅವರ ತಾಯಿಗೆ ಅವರು ಚಿಕ್ಕಮಗು  ಅಲ್ಲವೇ? ಈ ಕೊರೊನಾ ಕಾಲದಲ್ಲಿ ನಿಜವಾದ ದೊಡ್ಡ ತ್ಯಾಗಗಳು ನಮ್ಮೆಲ್ಲರ ತಾಯಂದಿರಿಂದ ನಡೆಯುತ್ತಿದೆ. ಬೆಳಿಗ್ಗೆ ಎದ್ದಾಗಿನಿಂದ, ಮನೆಯ ಸ್ವಚ್ಛತೆ, ಪೂಜೆ ಪುರಸ್ಕಾರ, ತಿಂಡಿ-ಊಟ, ಕಾಫಿ, ಟೀ, ಕುಟುಂಬದ ಸದಸ್ಯರ ಸ್ವಚ್ಛತೆ, ಅತಿಥಿಗಳ ಸತ್ಕಾರ, ಕುಟುಂಬದ ಆರ್ಥಿಕ ಪರಿಸ್ಥಿತಿಯ ಸುಧಾರಣೆ, ಗಂಡ ಮಕ್ಕಳ ಆರೋಗ್ಯ ಸುಧಾರಣೆ, ಮನೆಯಲ್ಲಿನ ಹಿರಿಯರ ಆರೋಗ್ಯ ಸುಧಾರಣೆ ನಿಜಕ್ಕೂ ಶ್ಲಾಘನೀಯ. ಯಾವುದೇ ಗೌರವ ಪ್ರತಿಷ್ಠೆಗಳಿಲ್ಲದೆ, ಯಾವುದೇ ಸಂಬಳವಿಲ್ಲದೆ ದುಡಿಯುವ ತ್ಯಾಗಮಯಿ ಅಮ್ಮ. ಈ ಕೊರೋನಾ ಕಾಲದಲ್ಲಿ ಇವೆಲ್ಲಾ ಕೆಲಸಗಳು ಇನ್ನಷ್ಟು ಹೆಚ್ಚಾಗಿವೆ. ಕುಟುಂಬದ ವಿವಿಧ ಸದ್ಯಸರ ವಿವಿಧ ಅಭಿರುಚಿಯ ಅಡುಗೆ, ಹಾಗೇ ವಿವಿಧ ರೀತಿಯ ಜೀವನಶೈಲಿ ರೂಪಿಸಿಕೊಳ್ಳುವುದು, ಜೊತೆಗೆ ಕುಟುಂಬಕ್ಕೆ ರೂಪಿಸಿಕೊಡುವುದು , ನಾವುಗಳೆಲ್ಲಾ ಕಲ್ಪಿಸುವಷ್ಟು ಸುಲಭವಲ್ಲ!! ಹಾಗೆಯೇ ಎಲ್ಲಾದಕ್ಕೂ ಬಹುಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ಮನೆಯಲ್ಲಿ ಚಿಕ್ಕಪುಟ್ಟ ಮಕ್ಕಳಿದ್ದರೆ ಅವರನ್ನು ಮನೆಯ ಒಳಗಡೆ ಇರಿಸಿಕೊಂಡು, ಹೊಸ ಹೊಸ ಅಭ್ಯಾಸಗಳು ಮನೆಯ ಪಾಠಗಳನ್ನು ಹೇಳಿ ಕೊಡಬೇಕಾಗುತ್ತದೆ. ದಿನಕ್ಕೊಮ್ಮೆ ಬೇಬಿ ಸಿಟ್ಟಿಂಗ್ ಟೀಚರ್ ಆಗಬೇಕಾಗುತ್ತದೆ, ತುಂಟ ಮಕ್ಕಳು ನಿಯಂತ್ರಣಕ್ಕೆ ಸಿಕ್ಕದ...