ವಿಷಯಕ್ಕೆ ಹೋಗಿ

CAPF ಪರೀಕ್ಷೆ ಫಲಿತಾಂಶ ಪ್ರಕಟ ; ಕರ್ನಾಟಕದಿಂದ ಇಬ್ಬರು ಆಯ್ಕೆ


CAPF ಪರೀಕ್ಷೆ ಫಲಿತಾಂಶ ; ಕರ್ನಾಟಕದಿಂದ ಇಬ್ಬರು ಆಯ್ಕೆ

ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸುವ ಎರಡನೇ ಅತಿ ದೊಡ್ಡ ಮತ್ತು ಉನ್ನತ ಪರೀಕ್ಷೆಯಾದ ಕೇಂದ್ರೀಯ ಸಶಸ್ತ್ರ ಫೋಲೀಸ್ ಪಡೆಯ (CAPF) ಸಹಾಯಕ ಕಮಾಂಡೆಂಟ್ (AC) 2020 ರ ಪರೀಕ್ಷೆಯಲ್ಲಿ, ಅಖಿಲ ಭಾರತ ಶ್ರೇಣಿ 119 ರೊಂದಿಗೆ ಬೆಂಗಳೂರಿನ ಯಲಹಂಕ ನಿವಾಸಿ ಹಾಗೂ ನಿವೃತ್ತ ಶಿಕ್ಷಕರಾದ ಗೋವಿಂದರಾಜಪ್ಪ ಮತ್ತು ಶಾರದಮ್ಮ ದಂಪತಿಯ ದ್ವಿತೀಯ ಪುತ್ರ ರೋಹಿತ್ ಜಿ ತೇರ್ಗಡೆ ಹೊಂದಿ, ಕರ್ನಾಟಕಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ. ಈ ಹುದ್ಧೆಗೆ ಪರೀಕ್ಷೆ ಬರೆದವರಲ್ಲಿ ಭಾರತದಾದ್ಯಂತ ಒಟ್ಟು 187 ಜನರನ್ನು ಆಯ್ಕೆಮಾಡಿಕೊಳ್ಳಲಾಗಿದೆ. ಕರ್ನಾಟಕದಿಂದ ಇಬ್ಬರು ಮಾತ್ರವೇ ಆಯ್ಕೆಯಾಗಿದ್ದು, ರೋಹಿತ್ ಜಿ ಅವರು ಮೊದಲಿಗರಾಗಿದ್ದಾರೆ. 160 ನೇ ಶ್ರೇಣಿಯೊಂದಿಗೆ ಪುನೀತ್ ಕುಮಾರ್ ಗಂಗಪ್ಪ ನಾಯ್ಕರ್ ಅವರು ಆಯ್ಕೆಯಾಗಿದ್ದಾರೆ.



CAPF ಸರ್ಕಾರದ ಗೆಜೆಟೆಡ್ ಗ್ರೂಪ್ 'ಎ' ವೃಂದದ ಹುದ್ಧೆಯಾಗಿದ್ದು, ರಾಜ್ಯ ಮಟ್ಟದ IPS ಹುದ್ಧೆಗೆ ಸಮಾನಾಂತರದ ಹುದ್ಧೆಯಾಗಿದೆ. ಕಳೆದ ವರ್ಷ ಸುಮಾರು ನಾಲ್ಕು ಲಕ್ಷಕ್ಕೂ  ಹೆಚ್ಚು ಜನ ವಿಧ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದರು. ಕರ್ನಾಟಕದಿಂದ ಮೂವತ್ತು ಜನರು ಈ ಪರೀಕ್ಷೆಯ ಎರಡನೇ ಹಂತವಾದ ದೈಹಿಕ ಆರೋಗ್ಯ ಸಂದರ್ಶನಕ್ಕೆ ಆಯ್ಕೆಯಾಗಿದ್ದರು.  ಅದರಲ್ಲಿ ಒಂಬತ್ತು ವಿಧ್ಯಾರ್ಥಿಗಳು ಅಂತಿಮ ಸಂದರ್ಶನಕ್ಕೆ ಆಯ್ಕೆಯಾಗಿ, ಇಬ್ಬರು ಮಾತ್ರ ಹುದ್ಧೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ ಜನತೆಗೆ ಹೊಸ ವರ್ಷಕ್ಕೆ ಹೊಸ ಸುದ್ಧಿ ತಂದಿರುವ ಇಬ್ಬರಿಗೂ ಶುಭಾಷಯಗಳು.


ರೋಹಿತ್ ಜಿ ಅವರು ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ (ಸ್ವಾಯತ್ತ) ತಮ್ಮ ಪದವಿ ಶಿಕ್ಷಣ ಮುಗಿಸಿ, ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿದ್ದು, ಪಿ.ಯು.ಸಿ ಓದುವಾಗಿನಿಂದಲೇ ಐ.ಎ.ಎಸ್ ಕನಸು ಕಂಡವರು. ಅಂದಿನಿಂದಲೇ ಪೂರ್ವ ತಯಾರಿಮಾಡಿಕೊಂಡು ಬಂದ ರೋಹಿತ್ ಅವರು ಇದೀಗ ಕರ್ನಾಟಕದ ಹೆಮ್ಮೆ. NET, SLET ಪರೀಕ್ಷೆಗಳಲ್ಲೂ ಉತ್ತಮ ಅಂಕಗಳನ್ನು ಪಡೆದುಕೊಂಡು, 2017 ರಲ್ಲಿ ನಡೆದ ಕರ್ನಾಟಕದ ಅತಿದೊಡ್ಡ ಚರ್ಚಾಸ್ಪರ್ಧೆ 'SPEAK FOR INDIA' ದಲ್ಲಿ 'MOST POPULAR SPEAKER' ಪುರಸ್ಕಾರಕ್ಕೆ ಭಾಜನರಾಗಿದ್ದರು. ಸಂತಸ ವ್ಯಕ್ತಪಡಿಸಿದ ಅವರು ಹೀಗೆ ಮಾತನಾಡಿದ್ದಾರೆ.
"ನನ್ನ ಗುರಿ ಸಿವಿಲ್ ಸರ್ವೀಸ್. ಅದಕ್ಕಾಗಿಯೇ ಮೂರು ವರ್ಷಗಳಿಂದ ಅಭ್ಯಾಸ ಮಾಡುತ್ತಾ ಬಂದಿದ್ದೇನೆ. ಐ.ಎ.ಎಸ್ ಭಾರತದ ಉನ್ನತ ಹುದ್ಧೆಯಾದ್ದರಿಂದ ಅದಕ್ಕೆ ಮಾಡಿಕೊಂಡ ತಯಾರಿಗಳು CAPF ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ಸಹಕರಿಸಿದೆ. ನನ್ನ ಭವಿಷ್ಯವನ್ನೇ ಎದುರುನೋಡುತ್ತಿದ್ದ ನನ್ನ ತಂದೆ-ತಾಯಿಗಳಿಗೆ, ಗುರು ವೃಂದದವರಿಗೆ, ಸ್ನೇಹಿತರಿಗೆ ನನ್ನ ಬೆಳವಣಿಗೆ ಖುಷಿ ತಂದಿದೆ. ನನ್ನ ದಾರಿ ಇಲ್ಲಿಗೆ ನಿಲ್ಲುವುದಿಲ್ಲ. ಇದರಿಂದ ನನ್ನ ಸಾಮರ್ಥ್ಯದ ಬಗ್ಗೆ, ಮುಂದಿನ ಹೆಜ್ಜೆಗಳ ಬಗ್ಗೆ ನನಗೆ ಭರವಸೆ ಮೂಡಿದೆ. ಐ.ಎ.ಎಸ್ ಮಾಡುವವರೆಗೂ ನನ್ನ ಅಭ್ಯಾಸ ಹೀಗೇ ಇರುತ್ತದೆ"

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

- ಅನಂತ ಕುಣಿಗಲ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಕೂರೋನಾದಲ್ಲೂ ಕರುಣಾಮಯಿ ಅಮ್ಮ - ಲೇಖನ - ಸಿಂಚನ ಜಿ ಎನ್

ಕೊರನದಲ್ಲೂ ಕರುಣಾಮಯಿ ಅಮ್ಮ " ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ "  ಎಂಬ ಮಾತಿನಂತೆ ಒಬ್ಬ ವ್ಯಕ್ತಿ ಎಷ್ಟೇ ದೊಡ್ಡವರಾದರೂ, ಅವರ ತಾಯಿಗೆ ಅವರು ಚಿಕ್ಕಮಗು  ಅಲ್ಲವೇ? ಈ ಕೊರೊನಾ ಕಾಲದಲ್ಲಿ ನಿಜವಾದ ದೊಡ್ಡ ತ್ಯಾಗಗಳು ನಮ್ಮೆಲ್ಲರ ತಾಯಂದಿರಿಂದ ನಡೆಯುತ್ತಿದೆ. ಬೆಳಿಗ್ಗೆ ಎದ್ದಾಗಿನಿಂದ, ಮನೆಯ ಸ್ವಚ್ಛತೆ, ಪೂಜೆ ಪುರಸ್ಕಾರ, ತಿಂಡಿ-ಊಟ, ಕಾಫಿ, ಟೀ, ಕುಟುಂಬದ ಸದಸ್ಯರ ಸ್ವಚ್ಛತೆ, ಅತಿಥಿಗಳ ಸತ್ಕಾರ, ಕುಟುಂಬದ ಆರ್ಥಿಕ ಪರಿಸ್ಥಿತಿಯ ಸುಧಾರಣೆ, ಗಂಡ ಮಕ್ಕಳ ಆರೋಗ್ಯ ಸುಧಾರಣೆ, ಮನೆಯಲ್ಲಿನ ಹಿರಿಯರ ಆರೋಗ್ಯ ಸುಧಾರಣೆ ನಿಜಕ್ಕೂ ಶ್ಲಾಘನೀಯ. ಯಾವುದೇ ಗೌರವ ಪ್ರತಿಷ್ಠೆಗಳಿಲ್ಲದೆ, ಯಾವುದೇ ಸಂಬಳವಿಲ್ಲದೆ ದುಡಿಯುವ ತ್ಯಾಗಮಯಿ ಅಮ್ಮ. ಈ ಕೊರೋನಾ ಕಾಲದಲ್ಲಿ ಇವೆಲ್ಲಾ ಕೆಲಸಗಳು ಇನ್ನಷ್ಟು ಹೆಚ್ಚಾಗಿವೆ. ಕುಟುಂಬದ ವಿವಿಧ ಸದ್ಯಸರ ವಿವಿಧ ಅಭಿರುಚಿಯ ಅಡುಗೆ, ಹಾಗೇ ವಿವಿಧ ರೀತಿಯ ಜೀವನಶೈಲಿ ರೂಪಿಸಿಕೊಳ್ಳುವುದು, ಜೊತೆಗೆ ಕುಟುಂಬಕ್ಕೆ ರೂಪಿಸಿಕೊಡುವುದು , ನಾವುಗಳೆಲ್ಲಾ ಕಲ್ಪಿಸುವಷ್ಟು ಸುಲಭವಲ್ಲ!! ಹಾಗೆಯೇ ಎಲ್ಲಾದಕ್ಕೂ ಬಹುಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ಮನೆಯಲ್ಲಿ ಚಿಕ್ಕಪುಟ್ಟ ಮಕ್ಕಳಿದ್ದರೆ ಅವರನ್ನು ಮನೆಯ ಒಳಗಡೆ ಇರಿಸಿಕೊಂಡು, ಹೊಸ ಹೊಸ ಅಭ್ಯಾಸಗಳು ಮನೆಯ ಪಾಠಗಳನ್ನು ಹೇಳಿ ಕೊಡಬೇಕಾಗುತ್ತದೆ. ದಿನಕ್ಕೊಮ್ಮೆ ಬೇಬಿ ಸಿಟ್ಟಿಂಗ್ ಟೀಚರ್ ಆಗಬೇಕಾಗುತ್ತದೆ, ತುಂಟ ಮಕ್ಕಳು ನಿಯಂತ್ರಣಕ್ಕೆ ಸಿಕ್ಕದ...