ವಿಷಯಕ್ಕೆ ಹೋಗಿ

ನೀಲಿ ಚುಕ್ಕಿಯ ನೆರಳು - ಪುಸ್ತಕ ಪರಿಚಯ - ಮಧುರಾಣಿ ಎಚ್ ಎಸ್ | ಅನಂತ ಕುಣಿಗಲ್


" ಗುರುತಿರದ ಸುಳಿಯಲ್ಲಿ ಪ್ರೇಮವನ್ನು ಧ್ಯಾನಿಸುವ ಕವಿತೆಗಳು "

ನನ್ನಮ್ಮನೇ ಆಗಿಹೋಗಿರುವ ಮಧುರಾಣಿ ಎಚ್ ಎಸ್ ಅವರ ಎರಡನೇ ಕವನ ಸಂಕಲನ 'ನೀಲಿ ಚುಕ್ಕಿಯ ನೆರಳು'. ಈ ಕೃತಿಯು ಆಯ್ದ ನಲವತ್ತು ಪದ್ಯಗಳ ಗುಚ್ಚ. ಇಲ್ಲಿನ ಹೆಚ್ಚು ಕವಿತೆಗಳು ಸ್ತ್ರೀಯ ಒಳಧ್ವನಿಯಿಂದ ರಚನವಾಗಿವೆ. ಕೃತಿಗೆ 'ಈ ಹೊತ್ತಿಗೆ ಮೊದಲ ಕಾವ್ಯ ಪ್ರಶಸ್ತಿ' ಸಿಕ್ಕಿರುವುದು ಮತ್ತೊಂದು ಶ್ಲಾಘನೀಯ ಸಂಗತಿ.

ಸ್ತ್ರೀಸಂವೇದನೆಗಳನ್ನೊಳಗೊಂಡ ಕವಿತೆಗಳನ್ನು ನಾವು ಹಿಂದಿನಿಂದಲೂ ಓದುತ್ತಾ ಬಂದಿದ್ದೇವೆ. ಅಂತಹದೇ ಒಂದು ವಿಭಿನ್ನ ಪ್ರಯತ್ನ ಈ 'ನೀಲಿ ಚುಕ್ಕಿಯ ನೆರಳು'. ಪ್ರತೀ ಪದ್ಯಗಳು ವೈವಿಧ್ಯಮಯ ದೃಷ್ಟಿಕೋನದಿಂದ ಕೂಡಿದ್ದು, ಅವುಗಳ ಆಳದೊಳಗೆ ಬಿದ್ದವರು ಮೇಲೇಳುವುದು ಕೊಂಚ ಕಷ್ಟವೇ! ರಚ್ಚೆ ಹಿಡಿಸುವಷ್ಟು ಚಮತ್ಕಾರಿಕೆ ಇಲ್ಲಿನ ಸಾಲುಗಳಲ್ಲಿ ಅಡಕವಾಗಿವೆ. ಮತ್ತು ಅಷ್ಟೇ ಆರ್ದ್ರತೆಯಿಂದ ಕೂಡಿವೆ.


" ಕತ್ತಿಗಳು ಮೊಂಡುಬಿದ್ದು ನೆಲಕಚ್ಛಿದ ಇತಿಹಾಸವಿದೆ
ಹೂವುಗಳು ಅನವರತ ಹುಟ್ಟುತ್ತಲೇ ಇವೆ "

ಪ್ರಸ್ತುತ ಧೃತಿಕೆಟ್ಟ ಸಮಾಜಕ್ಕೆ ಇಂಥಾ ಧೈರ್ಯ ತುಂಬುವ ಸಾಲುಗಳು ಅತ್ಯಗತ್ಯ. ಶತಮಾನಗಳಿಂದ ಯುದ್ಧಗಳು ನಡೆದು, ರಕ್ತದ ಹೊಳೆ ಹರಿದ ಕುರುಹುಗಳು ಮಾಸಿದರೂ.. ಹೂವುಗಳು ಅರಳುವುದನ್ನು ನಿಲ್ಲಿಸಿಲ್ಲ. ಯುದ್ಧ ಏರ್ಪಡಲು ವೈಷಮ್ಯ ಬೇಕು. ಹೂವು ಅರಳಲು ಸೂರ್ಯನ ಕಿರಣಗಳ ಸ್ಪರ್ಶಪ್ರೀತಿ ಸಾಕು. ಬೆಳಕಿಗೆ ಹೇಗೆ ಆಳ, ಆಕಾರ, ಕೊನೆ ಇಲ್ಲವೋ.. ಪ್ರೀತಿಗೂ ಕೂಡ ಹಾಗೇ.. ಪ್ರೀತಿ ಒಂದು ಅದಮ್ಯ ಕಡಲು. ಅಲ್ಲಿ ಮುಳುಗಲೂಬಹುದು, ಜೀವಿಸಲೂಬಹುದು.

" ಸಿಟ್ಟು ಸೆಡವುಗಳನ್ನೆಲ್ಲಾ ಸಗಣಿ ಬಗ್ಗುಡ ಮಾಡಿ ಎರಚಿದಲ್ಲಿ ನೆಲವೆಲ್ಲಾ ಮಟ್ಟಸ.. "

ಸಂಬಂಧಗಳೊಳಗಿನ ಅಂಕುಡೊಂಕುಗಳನ್ನು ಮಟ್ಟಸ ಮಾಡಲು ನೀಲಿ ಚುಕ್ಕಿಯಂತ ಹಿಡಿ ಪ್ರೀತಿಯೇ ಆಯುಧ. ಅದು ಎಲ್ಲರಿಗೂ ಸಲ್ಲುತ್ತದೆ. ಉಳಿಸಿಕೊಳ್ಳುವ ಆಸ್ಥೆ ಇಲ್ಲದವರು ಬಡವರಾಗುತ್ತಾರೆ.

ಕವಿತೆಗಳ ಕಸುವಿನ ಗುಣಮಟ್ಟವನ್ನು ಎಷ್ಟೆಂದು ಹೇಳುವುದು? ಎಲ್ಲವನ್ನೂ ಹೇಳಿದರೆ ಓದುಗರಿಗೇನು ಬಿಟ್ಟೇನು?? ನಲವತ್ತು ಕವಿತೆಗಳು ಒಂದು ದಿನಕ್ಕೆ ಮುಗಿದವು. ಆದರೆ ಅವು ನನ್ನೊಳಗೆ ಸೃಷ್ಠಿಸಿರುವ ಸಂಚಲನ ಈ ಜನ್ಮಕ್ಕೆ ತೀರುವುದಿಲ್ಲ. ಇಷ್ಟನ್ನು ಮಾತ್ರ ಹೇಳಬಲ್ಲೆ.

ಎಲ್ಲರೂ ಓದಬಹುದಾದ ಕವಿತೆಗಳು ಇಲ್ಲಿ ಮಡುಗಟ್ಟಿ ನಿಮ್ಮ ಓದಿನ ಸ್ಪರ್ಶಕ್ಕಾಗಿಯೇ ಕಾದು ಕೂತಿವೆ. ಬೇಗ ಓದಿಕೊಂಡು ಕಣ್ಮುಚ್ಚಿ ಒಮ್ಮೆ ಧ್ಯಾನಿಸಿಬಿಡಿ. ಪರಿಶುದ್ಧ ಪ್ರೇಮದ ಅರಿವಾದೀತು. ಅಮ್ಮನ ಇನ್ನಷ್ಟು ಕವಿತೆಗಳನ್ನು ಓದುವ ತವಕದಲ್ಲಿ ನಾನಿದ್ದೇನೆ. ಓದಿ ಬರೆದರೆ ಸಾಲದೆಂದು ಒಂದು ಕವಿತೆಯನ್ನೂ ವಾಚಿಸಿದ್ದೇನೆ. ಅದನ್ನು ನೀವು ಇಲ್ಲಿ ಆಲಿಸಬಹುದು.

            https://youtu.be/vDwc-vhMcy4


                         - ಅನಂತ ಕುಣಿಗಲ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಯಾರ ಸ್ವಾತಂತ್ರ್ಯ? - ಕವಿತೆ - ಚಂದ್ರಪ್ಪ ಬೆಲವತ್ತ

ಯಾರ ಸ್ವಾತಂತ್ರ್ಯ ? ಬಂತಪ್ಪ ಸ್ವಾತಂತ್ರ್ಯ  ಆಗಷ್ಟ್ ಹದಿನೈದರ ಸ್ವಾತಂತ್ರ್ಯ  47ರ  ಮಧ್ಯ ರಾತ್ರಿಯ ಸ್ವಾತಂತ್ರ್ಯ  ಭೂಮಿ ನುಂಗುವರ ಪಾಲಿಗೆ ಬಂತು ಅನುದಾನ ತಿನ್ನುವರ ನಾಲ್ಗೆಗೆ  ಬಂತು ಸುಳ್ಳು ಬುರುಕರ ಪಾಲಿಗೆ ಬಂತು  ಆಗಷ್ಟ್ ಹದಿನೈದರ ಸ್ವಾತಂತ್ರ್ಯ  ಕಾಳ ಧನಿಕರ ಜೇಬಿಗೆ ಬಂತು  ಬಡವರ ಕೊರಳಿಗೆ ಉರುಳೆ ಆಯ್ತು  ಹೆಣ್ಣು ಮಕ್ಕಳ ಕಣ್ಣೀರಾಯ್ತು  47ರ ಸ್ವಾತಂತ್ರ್ಯ ಮಧ್ಯರಾತ್ರಿಯ ಸ್ವಾತಂತ್ರ್ಯ  ಧರ್ಮಗಳ ನಡುವಿನ ಕಂದರವಾಯ್ತು ಜಾತಿಯ ಆಳದ ಬೇರು ಬಿಟ್ಟಾಯ್ತು  ಮಾನವ ಧರ್ಮವ ಮರೆಯಿಸಿ ಬಿಟ್ಟಿತು  ಆಗಷ್ಟ್ 15ರ ಸ್ವಾತಂತ್ರ್ಯ  ಸಮಾನ ಆರೋಗ್ಯ ತರಲೇ ಇಲ್ಲ  ಸಮಾನ ಶಿಕ್ಷಣ ಕೊಡಿಸಲೇ ಇಲ್ಲ  ಸಮಾನ ಸಂಪತ್ತು ಹಂಚಲೇ ಇಲ್ಲ  47ರ ಮಧ್ಯರಾತ್ರಿಯ ಸ್ವಾತಂತ್ರ್ಯ  ಜಾತಿಯ ಸೋಂಕು ತೊಲಗಲೇ ಇಲ್ಲ  ಅಸಮಾನತೆಯ ನೀಗಿಸಲಿಲ್ಲ  ಹಸಿದವರತ್ತ ಸರಿಯಲೂ ಇಲ್ಲ  ಆಗಷ್ಟ್ 15ರ ಸ್ವಾತಂತ್ರ್ಯ  ಸುಳ್ಳು ಬುರುಕರ ಪಾಲಿಗೆ ಬಂತೆ  ಕೋಮುವಾದಿಗಳ ಬಾಯಿಗೆ ಬಂತೆ ರಿವಾಜು ದಿಕ್ಕರಿಸುವವರ ಜೊತೆಗೆ ಇತ್ತೇ  47ರ ಸ್ವಾತಂತ್ರ್ಯ  ಕಾಲಿನ ಕೋಳವು ಮುರಿಯಲು ಇಲ್ಲ ಜೀತದ ದುಡಿಮೆಯು ನಿಲ್ಲಲೇ ಇಲ್ಲ  ದಣಿಗಳ  ದನಿಯು ಕುಗ್ಗಲೇ ಇಲ್ಲ  ಬಡವನ ಬವಣೆ  ತಗ್ಗಿಸಲಿಲ್ಲ  47ರ ಸ್ವಾತ...