ವಿಷಯಕ್ಕೆ ಹೋಗಿ

ಅನಂತ ಕುಣಿಗಲ್ - Anantha Kunigal - writer


ಯವ ಸಾಹಿತಿ ಅನಂತ ಕುಣಿಗಲ್ ಅವರು ಈಗಾಗಲೇ ಋಣಭಾರ ಕಥಾಸಂಕಲನ ಹಾಗೂ ಮೂರನೆಯವಳು ಕವನಸಂಕಲನ ಪ್ರಕಾರಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ದೃಢವಾದ ಹೆಜ್ಜೆಗಳ ಮೂಲಕ ಪರಿಚಯವಾಗಿದ್ದಾರೆ. ಇದೀಗ ರೌದ್ರಾವರಣಂ ಮೂಲಕ ಕಾದಂಬರಿ ಪ್ರಕಾರದಲ್ಲೂ ಗೆಲವು ಸಾಧಿಸಿದ್ದಾರೆ. ಬಿಡುಗಡೆಗೂ ಮುಂಚೆಯೇ ಅಪಾರ ಮೆಚ್ಚುಗೆಗೆ ಒಳಗಾಗಿದ್ದು, ಮೊದಲ ಮುದ್ರಣದ ಪ್ರತಿಗಳು ಭರ್ಜರಿ ಮಾರಾಟ ಕಾಣುತ್ತಿವೆ.

ಹಲವಾರು ದಿನ ಪತ್ರಿಕೆ ಮತ್ತು ವೆಬ್ ಪತ್ರಿಕೆಗಳಲ್ಲಿ ಇವರ ಲೇಖನ ಮತ್ತು ಕವಿತೆಗಳು ಪ್ರಕಟವಾಗಿವೆ. ಅವ್ವ ಪುಸ್ತಕಾಲಯ ಎಂಬ ಸಾಹಿತ್ಯ ಬಳಗವನ್ನು ಕಟ್ಟಿಕೊಂಡು ಸದಾ ಕ್ರಿಯಾಶೀಲರಾಗಿರುವ ಇವರು ಯುವ ಪೀಳಿಗೆಯ ಭರವಸೆಯ ಬರಹಗಾರನಾಗಿ ಛಾಪು ಮೂಡಿಸಿರುತ್ತಾರೆ.


ಯುವ ಸಾಹಿತಿ, ರಂಗ ಕಲಾವಿದ ಮತ್ತು ಸಹಾಯಕ ನಿರ್ದೇಶಕನಾಗಿ ಹತ್ತು ಹಲವು ಕೆಲಸಗಳಲ್ಲಿ ತೊಡಗಿಕೊಂಡಿರುವ ಇವರ ಬಗ್ಗೆ ಹಾಗೂ ಇವರ ಕೃತಿಗಳ ಬಗ್ಗೆ ಪರಿಚಯ ಈ ಕೆಳಗಿನಂತಿವೆ.

ಅನಂತ ಅವರ ಪರಿಚಯ :

ಅವ್ವ ಪುಸ್ತಕಾಲಯದ ಪರಿಚಯ :

ಅನಂತ ಅವರ ಕಿರುಚಿತ್ರಗಳು :

ಅನಂತ ಅವರ ಬರಹಗಳು :

ಋಣಭಾರ ಪುಸ್ತಕ ಪರಿಚಯ :

ಮೂರನೆಯವಳು ಪುಸ್ತಕ ಪರಿಚಯ :

ರೌದ್ರಾವರಣಂ ಪುಸ್ತಕ ಕುರಿತು :

ಅನಂತ ಅವರು ಸಾಮಾಜಿಕ ಜಾಲತಾಣಗಳಲ್ಲಿ..

ಅನಂತ ಅವರ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಕೊಳ್ಳಲು ಇಲ್ಲಿ ಸಂಪರ್ಕಿಸಿ..
ಅವ್ವ ಪುಸ್ತಕಾಲಯ: 8548948660

ಧನ್ಯವಾದಗಳು 💐🥰🥳
ಅವ್ವ ಪುಸ್ತಕಾಲಯ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಓದಬೇಕಾದ ಕನ್ನಡದ ಮಹತ್ತರ ಪುಸ್ತಕಗಳು - ಅವ್ವ ಪುಸ್ತಕಾಲಯ

" ಓದಬೇಕಾದ ಕೆಲವು ಕನ್ನಡ ಸಾಹಿತ್ಯ ಪುಸ್ತಕಗಳು " (ಇದು ನನ್ನ ಸುತ್ತಲಿನವರ ಅಭಿಪ್ರಾಯದ ಮೇರೆಗೆ ಓದುಗರಲ್ಲಿ ಅಭಿರುಚಿ ಹೆಚ್ಚಿಸಲು ಕಟ್ಟಿರುವ ಪಟ್ಟಿ. ನೀವು ಓದಿರುವ ಬೆಸ್ಟ್ ಪುಸ್ತಕಗಳು ಬಿಟ್ಟುಹೋಗಿದ್ದರೆ ದಯವಿಟ್ಟು ಸೇರಿಸಿ) ತೇಜಸ್ವಿ : ಮಹಾಪಲಾಯನ ಕರ್ವಾಲೋ ಪ್ಯಾಪಿಲಾನ್ ಚಿದಂಬರ ರಹಸ್ಯ ಜುಗಾರಿಕ್ರಾಸ್ ಭಯಾನಕ ನರಭಕ್ಷಕ ಕಿರಗೂರಿನ ಗಯ್ಯಾಳಿಗಳು ಅಬಚೂರಿನ ಫೋಸ್ಟಾಫೀಸು ಕೃಷ್ಣೇಗೌಡನ ಆನೆ ಅಣ್ಣನ ನೆನಪು ಹೊಸ ವಿಚಾರಗಳು  ಕೆ ಎನ್ ಗಣೇಶಯ್ಯ : ಶಾಲಭಂಜಿಕೆ ಆರ್ಯವೀರ್ಯ ಗುಡಿಮಲ್ಲಮ್ ಚಿತಾದಂತ ಬೆಳ್ಳಿಕಾಳಬಳ್ಳಿ ಶಿಲಾಕುಲವಲಸೆ ಕನಕಮುಸುಕು  ಕರಿಸಿರಿಯಾನ ಕಪಿಲಿಪಿಸಾರ ಎಸ್ ಎಲ್ ಬಿ : ಭಿತ್ತಿ ವಂಶವೃಕ್ಷ ಗೃಹಭಂಗ ನಾಯಿ ನೆರಳು ಕವಲು ಯಾನ ಸಾರ್ಥ ಪರ್ವ ದಾಟು ಮಂದ್ರ ಆವರಣ  ಅನ್ವೇಷಣ ತ.ರಾ.ಸು : ನಾಗರಹಾವು ಮಸಣದ ಹೂ ಹಂಸಗೀತೆ ಶಿಲ್ಪಶ್ರೀ ರಕ್ತರಾತ್ರಿ ತಿರುಗುಬಾಣ ದುರ್ಗಾಸ್ತಮಾನ  ಗಿರೀಶ್ ಖಾರ್ನಾಡ್ : ಆಡಾಡತ ಆಯುಷ್ಯ ತುಘಲಕ್ ತಲೆದಂಡ ಹಯವದನ ನಾಗಮಂಡಲ ಯಯಾತಿ  ವಸುದೇಂಧ್ರ : ಮೋಹನಸ್ವಾಮಿ ಹಂಪಿ ಎಕ್ಸ್ ಪ್ರೆಸ್ ತೇಜೋ ತುಂಗಭದ್ರ ನಮ್ಮಮ್ಮ ಅಂದ್ರೆ ನಂಗಿಷ್ಟ ಐದು ಪೈಸೆ ವರದಕ್ಷಿಣೆ  ಜೋಗಿ : L ಅಶ್ವತ್ಥಾಮನ್ ಬೆಂಗಳೂರು ಸೀರೀಸ್  ಹಲಗೆ ಬಳಪ ಜಾನಕಿ ಕಾಲಂ ಚಂ. ಶೇ. ಕಂ : ಜೋಕುಮಾರಸ್ವಾಮಿ ಸಂಗ್ಯಾಬಾಳ್ಯ ಸಾಂಬಶಿವ ಪ್ರಹಸನ ಸಿರಿಸಂಪಿಗೆ ಮಹಾಮಾಯಿ ಸಿಂಗಾರೆವ್ವ & ಅರಮನೆ...

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

Avva Pustakalaya

ಅವ್ವ ಪುಸ್ತಕಾಲಯ ಸಾಹಿತ್ಯ ಬಳಗವು 2020 ರ ಏಪ್ರಿಲ್ 04 ರಂದು ಶ್ರೀಮಾನ್ ಲೇಟ್ ನಾರಸಯ್ಯ ಅವರ ಸ್ಮರಣಾರ್ಥವಾಗಿ ರೂಪುಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಓದುಗರ ಬಳಗವನ್ನು ಹೊಂದಿದೆ. ಇದು ಡಿಜಿಠಲ್ ಗ್ರಂಥಾಲಯವಾಗಿದ್ದು, ಓದಿನ ಅಭಿರುಚಿ ಹಬ್ಬಿಸಲು ಬಹಳಷ್ಟು ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ಜುಲೈ ತಿಂಗಳಲ್ಲಿ ಪ್ರಕಟಿತ ಕೃತಿಗಳನ್ನು ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಆಹ್ವಾನಿಸಲಾಗುವುದು. ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿಯ ಜೊತೆಗೆ ಐದು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಹಂಚಿ, ಅವರ ಪುಸ್ತಕಗಳನ್ನು ಅವ್ವ ಪುಸ್ತಕಾಲಯ ವೇದಿಕೆಯ ಮುಖೇನ ಓದುಗರಿಗೆ ಮುಟ್ಟಿಸಲಾಗುವುದು . ಈಗಾಗಲೇ ಅವ್ವ ಪುಸ್ತಕಾಲಯದಿಂದ ಪ್ರಧಾನ ಕಾರ್ಯದರ್ಶಿಗಳಾದ  ಯುವಲೇಖಕ ಅನಂತ ಅವರ ಮೂರು ಕೃತಿಗಳು ಪ್ರಕಟವಾಗಿದ್ದು ಅವುಗಳು ಓದುಗರಿಗೆ ರಿಯಾಯಿತಿ ದರದಲ್ಲಿ ಸಿಗುತ್ತಿವೆ. ಓದುಗರು ನಮ್ಮನ್ನು ಸಂಪರ್ಕಿಸುವ ಮೂಲಕ ಪುಸ್ತಕಗಳನ್ನು ಕೊಂಡು ಓದಬಹುದು. ಮತ್ತು ನಮ್ಮ ಸಾಹಿತ್ಯ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. 1). ಅವ್ವ ಪುಸ್ತಕಾಲಯ #189, ಕೆಂಚನಹಳ್ಳಿ ಅಂಚೆ ಹುಲಿಯೂರುದುರ್ಗ ಹೋಬಳಿ ಕುಣಿಗಲ್ ತಾಲ್ಲೂಕು ತುಮಕೂರು - 572123 ಮೊ : 8548948660 Mail :  avvapustakaalaya@gmail.com 2).  Facebook....