ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

2022ರ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಕಿರುಕಟ್ಟಿ ಪ್ರಕಟ

2022ರ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ಕಿರುಕಟ್ಟಿ ಪ್ರಕಟ  ಅವ್ವ ಪುಸ್ತಕಲಯ ಸಾಹಿತ್ಯ ಬಳಗವು ಕಳೆದ ಎರಡು ವರ್ಷಗಳಿಂದ ದಿ. ಶ್ರೀಮಾನ್ ನರಸಯ್ಯ ಅವರ ಸ್ಮರಣಾರ್ಥ ಪ್ರಕಟಿತ ಕೃತಿಗಳನ್ನು ಆಹ್ವಾನಿಸಿ, ಆಯ್ಕೆಯಾದ ಕೃತಿಗಳಿಗೆ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ಈ ವರ್ಷ ಪ್ರಶಸ್ತಿಗೆ ಸುಮಾರು 80ಕ್ಕೂ ಹೆಚ್ಚು ಕೃತಿಗಳು ಬಂದಿದ್ದು, ನಿರ್ಣಾಯಕರ ಆಯ್ಕೆಯಂತೆ  (ನಿರ್ಣಾಯಕರ ಬಗ್ಗೆ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗುವುದು)  ಸೃಜನಶೀಲವೆನಿಸುವ 15 ಕೃತಿಗಳ ಕಿರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ತಿಂಗಳಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. 15 ಕೃತಿಗಳಲ್ಲಿ 5 ಕೃತಿಗಳನ್ನು ಆಯ್ಕೆ ಮಾಡಿ, ಅದರಲ್ಲಿ ಸೃಜನಶೀಲವೆನಿಸುವ ಒಂದು ಕೃತಿಗೆ 2022ರ ಸೃಜನ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿಯನ್ನು, ಅದರ ನಂತರದ ನಾಲ್ಕು ಕೃತಿಗಳಿಗೆ ಅವ್ವ ಪುಸ್ತಕ ಬಹುಮಾನವನ್ನು ನೀಡಿ ಅಭಿನಂದಿಸಲಾಗುತ್ತದೆ. ಜನವರಿ ತಿಂಗಳಿನಲ್ಲಿ ನಡೆಯುವ ಅವ್ವ ಪುಸ್ತಕಾಲಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಅವ್ವ ಪುಸ್ತಕಾಲಯದ ಅಧ್ಯಕ್ಷರಾದ ನಾರಾಯಣ್ ಕೆ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಯಾವುದೇ ಕ್ರಮಾಂಕವಿಲ್ಲದೆ ಕಿರುಪಟ್ಟಿಗೆ ಆಯ್ಕೆಯಾದ ಕೃತಿಗಳ ಹೆಸರು ಮತ್ತು ಲೇಖಕರ ಹೆಸರನ್ನು ಈ ಕೆಳಗೆ ನೀಡಲಾಗಿದೆ.  * ಆರನೆಯ ಬೆರಳು ...