ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸಾಹಿತ್ಯ ಸ್ಪರ್ಧೆಗಳು 2023

ವಾರ್ಷಿಕೋತ್ಸವ ಸ್ಪರ್ಧೆಗಳು 2023 ಅವ್ವ ಪುಸ್ತಕಾಲಯ ಸಾಹಿತ್ಯ ಬಳಗದ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರೆಲ್ಲರೂ ಭಾಗವಹಿಸಬಹುದು. ಯಾವುದೇ ವಯಸ್ಸಿನ ಮಿತಿ ಇಲ್ಲ. ಯಾವುದೇ ನೊಂದಣಿ ಇರುವುದಿಲ್ಲ. ಸ್ಪರ್ಧೆ 01 - ಪದಬಂದ ರಚನೆ * 4×4 ಮನೆಯ ಪದಬಂಧ ರಚಿಸಬೇಕು. * ಹಾಳೆ ಮೇಲೆ ಬರೆದು ಫೋಟೋ ಕಳಿಸಬಹುದು. * ಕನ್ನಡ ಸಾಹಿತ್ಯ ಪುಸ್ತಕಗಳ ಹೆಸರು, ಲೇಖಕರು, ಪ್ರಶಸ್ತಿಗಳು, ಕೃತಿಯಲ್ಲಿ ಬರುವ ಊರು, ಪಾತ್ರ ಇವುಗಳನ್ನು ಬಳಸಿಕೊಳ್ಳಬಹುದು. ಸ್ಪರ್ಧೆ 02 - ಸ್ವರಚಿತ ಕವನ ಸ್ಪರ್ಧೆ * ಗರಿಷ್ಟ 20 ಸಾಲುಗಳ ಕವನ ರಚಿಸಬೇಕು. * ಯಾವುದೇ ವಿಷಯದ ಮೇಲೆ ಕವಿತೆ ರಚಿಸಬಹುದು. ಸ್ವರಚಿತವಾಗಿರಬೇಕು. ಈ ಹಿಂದೆ ಎಲ್ಲೂ ಪ್ರಕಟವಾಗಿರಬಾರದು. * ಆಯ್ಕೆಯಾದರೆ 2024ರ ಜನೆವರಿಯಲ್ಲಿ ನಡೆಯುವ ಅವ್ವ ಪುಸ್ತಕಾಲಯ ವಾರ್ಷಿಕೋತ್ಸವದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಪದಬಂಧ ಹಾಗೂ ಸ್ವರಚಿತ ಕವಿತೆಯನ್ನು ಮೇಲ್ ಮಾಡಲು ಡಿಸೆಂಬರ್ - 31- 2023 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ. ಮೇಲ್ : avvapustakaalaya@gmail.com ಪದಬಂಧ ಸ್ಪರ್ಧೆಯಲ್ಲಿ ಅತ್ಯುತ್ತಮವೆನಿಸಿದ ಐವರಿಗೆ & ಸ್ವರಚಿತ ಕವನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಹತ್ತು ಜನರಿಗೆ ಪ್ರಶಸ್ತಿಪತ್ರ, ಪುಸ್ತಕ ಬಹುಮಾನ ಹಾಗೂ ನಗದು ಬಹುಮಾನವಿರುತ್ತದೆ.

ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023

ಅವ್ವ ಪುಸ್ತಕಲಯ ಸಾಹಿತ್ಯ ಬಳಗವು ದಿ. ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ 2023 ಫಲಿತಾಂಶ ಈ ಕೆಳಗಿನಂತಿದೆ. ಅಹರ್ನಿಶಿ ಪ್ರಕಾಶನದ ಫಾತಿಮಾ ರಲಿಯಾ ಅವರು ಬರೆದಿರುವ "ಕಡಲು ನೋಡಲು ಹೋದವಳು" ಪ್ರಬಂಧ ಸಂಕಲನಕ್ಕೆ ಈ ವರ್ಷದ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ ದೊರಕಿದೆ. ಸಂತೋಷಕುಮಾರ ಮೆಹೆಂದಳೆ ಅವರ "ವೈಜಯಂತಿಪುರ" ಕಾದಂಬರಿ, ಚೈತ್ರಾ ಶಿವಯೋಗಿಮಠ ಅವರ "ಪೆಟ್ರಿಕೋರ್" ಕವನಸಂಕಲನ, ಗಾಯತ್ರಿರಾಜ್ ಅವರ "ಟ್ರಾಯ್" ಕಾದಂಬರಿ, ಮುನವ್ವರ್ ಜೋಗಿಬೆಟ್ಟು ಅವರ "ಜಿನ್ನ್ ಮತ್ತು ಪರ್ಷಿಯನ್ ಕ್ಯಾಟ್" ಕಥಾಸಂಕಲನ ಕೃತಿಗಳು ಈ ವರ್ಷದ ಮೆಚ್ಚುಗೆ ಬಹುಮಾನಕ್ಕೆ ಆಯ್ಕೆಯಾಗಿವೆ. ಲೇಖಕ, ವಿಮರ್ಶಕರಾದ ಮಹೇಶ ಅರಬಳ್ಳಿ ಅವರು ಕೃತಿಗಳ ಆಯ್ಕೆಯಲ್ಲಿ ತೀರ್ಪುಗಾರರಾಗಿದ್ದರು. ಐದು ಕೃತಿಯ ಲೇಖಕರಿಗೆ 2024ರ ಜನೆವರಿ ತಿಂಗಳಲ್ಲಿ ನಡೆಯುವ ಅವ್ವ ವಾರ್ಷಿಕೋತ್ಸವದಲ್ಲಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ  avvapustakaalaya@gmail.com  ಗೆ ಬರೆಯಿರಿ..